ಯುವನಿಧಿ ಜೊತೆಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡುವ ತರಬೇತಿ ನೀಡಲು ಕ್ರಮ- ಸಿಎಂ ಸಿದ್ದರಾಮಯ್ಯ

ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದರು.

ನಾವು ಯುವ ನಿಧಿಯನ್ನೂ ಕೊಡುತ್ತೇವೆ, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ವಿದ್ಯಾರ್ಥಿ ಮತ್ತು ಯುವಜನರಿಗೆ ಮೇಲಿರುವ ನಮ್ಮ ಸರ್ಕಾರದ ಅಭಯ ಎಂದು ಹೇಳಿದರು.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

3 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

11 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

12 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago