ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ತಿಳಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೆರವು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿದರೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ನೆರವು ಕಲ್ಪಿಸಬೇಕು. ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ಕಲ್ಪಿಸಿ ಎಂದರು.
ಜಿಲ್ಲೆಯಲ್ಲಿನ ಕೈಗಾರಿಕೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ವಿವರ ಪಡೆದು ಭರ್ತಿ ಮಾಡಿಕೊಳ್ಳಲು ಕೈಗಾರಿಕಾ ಮುಖ್ಯಸ್ಥರ ಸಭೆ ನಡೆಸಿ. ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆಗೆ ಸಿದ್ಧತೆ ಕೈಗೊಳ್ಳಿ ಇದರಿಂದ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಸಹಕಾರಿ ಆಗಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮತ್ತು ಪದವಿ ಮತ್ತು ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು, ಕೈಗಾರಿಕಾ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…