ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

1 hour ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

2 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

2 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

5 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

8 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

10 hours ago