ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

2 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

3 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

6 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

6 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

15 hours ago