ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago