ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

4 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

15 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

19 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

21 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago