ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

13 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

18 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago