ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago