ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.
ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.
ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.
ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.
ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.
ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.
ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್ಎಸ್ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…