ಯುವಸೌರಭ: ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ- ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್

ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ ನೀಡುವುದು ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು.

ನಗರದ ಜವಾಹರ್ ನವೋದಯ ವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.‌

ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಪರಂಪರೆಯ ಅರಿವು ಯುವಜನತೆಯಲ್ಲಿ ಇರಬೇಕು. ಕಲೆ ಮತ್ತು ಸಾಹಿತ್ಯದ  ಆಸಕ್ತಿಯು ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣದಲ್ಲಿ  ಸಹಕಾರಿ ಆಗುತ್ತದೆ ಎಂದರು.

ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಮತ್ತು ಸಂತಸದಾಯಕ ಕಲಿಕೆಗೆ ಸಾಂಸ್ಕೃತಿಕ ವೇದಿಕೆಗಳ ಅಗತ್ಯ ಇರುತ್ತದೆ. ನಮ್ಮ ಕನ್ನಡ  ನಾಡು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಇಂತಹ  ಪರಂಪರೆಯನ್ನು ಮುಂದಿನ‌ ತಲೆಮಾರಿಗೆ  ತಲುಪಿಸುವ. ಜವಾಬ್ದಾರಿಯನ್ನು ಯುವಜನತೆ  ನಿರ್ವಹಿಸಬೇಕಾಗಿದೆ. ಇದಕ್ಕಾಗಿ ಯುವಜನತೆ ಸಾಂಸ್ಕೃತಿಕ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಯುವ ಸೌರಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್.ಚಕ್ರವರ್ತಿ ವಹಿಸಿದ್ದರು. ಸಮಾರಂಭದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ  ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ. ಪಿ.ಗೋವಿಂದರಾಜು,   ನವೋದಯ ವಿದ್ಯಾಲಯ ಕನ್ನಡ ಪ್ರಾಧ್ಯಾಪಕ ಜೆ.ಪಿ.ಉಪಾಧ್ಯೆ, ಜಾನಪದ ಕಲಾವಿದರುಗಳಾದ ಶ್ಯಾಕಲದೇವನಪುರ ರಾಮಚಂದ್ರಯ್ಯ, ವಿಜಯಕುಮಾರ್, ನವೋದಯ ವಿದ್ಯಾಲಯದ. ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಯುವ ಸೌರಭ ದೊಡ್ಡಬಳ್ಳಾಪುರ ಹಂಸವೇಣಿ ತಂಡದವರಿಂದ ಸಮೂಹ ನೃತ್ಯ, ದೇವನಹಳ್ಳಿ ಅರುಣ್ ಕುಮಾರ್ ತಂಡದವರಿಂದ ಸುಗಮಸಂಗೀತ,  ಅರದೇಶನಹಳ್ಳಿ ಅಂಜಲಿ ತಂಡದವರಿಂದ ವಚನಗಾಯನ, ಟಿ.ಅಗ್ರಹಾರ ದೀಪಿಕಾ ತಂಡದವರಿಂದ ಸಾಮಾಜಿಕ ನಾಟಕ ಪ್ರದರ್ಶನ, ಹೊಸಕೋಟೆ ನವೀನ್ ತಂಡದವರಿಂದ ತಮಟೆ ಮತ್ತು ದೇವನಹಳ್ಳಿ ಮಧು ತಂಡದವರಿಂದ ನಗಾರಿ   ವಾದ್ಯಗಳ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

4 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

8 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

9 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

11 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

11 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

15 hours ago