ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ ಶ್ಲಾಘಿಸಿದರು.

ಇಂದು ಬೆಸೆಂಟ್ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.

ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.

ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು…

ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿ‌ಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…

ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು…

ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 days ago