ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್ಚಾರ್ಜ್ ಎಂ ಎ ಚಲ್ಲಯ್ಯ ಶ್ಲಾಘಿಸಿದರು.
ಇಂದು ಬೆಸೆಂಟ್ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.
ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.
ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು…
ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…
ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು…
ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…