ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್ಚಾರ್ಜ್ ಎಂ ಎ ಚಲ್ಲಯ್ಯ ಶ್ಲಾಘಿಸಿದರು.
ಇಂದು ಬೆಸೆಂಟ್ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.
ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.
ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು…
ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…
ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು…
ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…