Categories: ಕೋಲಾರ

ಯುವ ಕಾಂಗ್ರೆಸ್ ಚುನಾವಣೆ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ಆಫ್ರೀದ್ ಪಾಷ ಸ್ಪರ್ಧೆ

ಕೋಲಾರ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯು ಆ.೧೬ ರಿಂದ ಸೆ.16ರ ವರಗೆ ಒಂದು ತಿಂಗಳು ಕಾಲ ನಡೆಯಲಿದ್ದು ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಯುವಕರು ಹೆಚ್ಚಿನ ರೀತಿಯಲ್ಲಿ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಅಭ್ಯರ್ಥಿ ಸೈಯದ್ ಆಫ್ರೀದ್ ಪಾಷ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಯುವಕರ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖವಾದ ಪಾತ್ರವಹಿಸಿದ್ದೇನೆ ನಗರಸಭೆ, ವಿಧಾನಸಭೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದೇನೆ ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು 10 ವರ್ಷಗಳ ಕಾಲ ವಿಧ್ಯಾರ್ಥಿಗಳ ಮತ್ತು ಯುವಕರ ಮಧ್ಯೆ ಕೆಲಸ ಮಾಡಿದೇನೆ ಕಾಂಗ್ರೆಸ್ ಪಕ್ಷವನ್ನು ಯುವಕರ ಮಧ್ಯೆ ಬಲಿಷ್ಠವಾಗಿ ಕಟ್ಟಲು ಯುವಕರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು ಎಂಎಲ್ಸಿಗಳು ಮಾಜಿ ಶಾಸಕರು ಸೇರಿದಂತೆ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ನನ್ನ ಕ್ರಮ ಸಂಖ್ಯೆ 2 ಆಗಿದ್ದು ಯುವ ಕಾಂಗ್ರೆಸ್ ಸದಸ್ಯ ಪಡೆಯಲು ಐವೈಸಿ ಆ್ಯಫ್ ಮೂಲಕ ಮತದಾನ ಮಾಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago