ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಅವರನ್ನು ಬಿಜೆಪಿ ತಾಲೂಕು ಯುವ ಘಟಕದ ವತಿಯಿಂದ ದೇವನಹಳ್ಳಿ ಪ್ರವಾಸಿಮಂದಿರದಲ್ಲಿ ಅಭಿನಂದಿಸಿದರು.
ಈ ವೇಳೆಯಲ್ಲಿ ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಮಾತನಾಡಿ ನನ್ನ ಕರ್ತವ್ಯ ನಿಭಾಯಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮತ್ತು ಮುಖಂಡರೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಾರೆಂಬ ವಿಶ್ವಾಸವಿದೆ. ನಾನು ಪಕ್ಷದಲ್ಲಿ ಅನೇಕ ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ ಪಕ್ಷ ನನ್ನನ್ನು ಗುರುತಿಸಿ ನೀಡಿದ ಜವಬ್ದಾರಿಯನ್ನು ನಿಬಾಯಿಸುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಶ್ವಾಸವಿದೆ. ಯುವ ಘಟಕ ಸದಾ ನಮ್ಮ ಪಕ್ಷದ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ದೇ.ಸು.ನಾಗಾರಾಜ್, ಸುರೇಶಾಚಾರ್, ಸುನೀಲ್, ವಿಜಯ ರಾಘವೇಂದ್ರ,ಯುವ ಘಟಕದ ಪದಾಧಿಕಾರಿಗಳು ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…