ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಅವರನ್ನು ಬಿಜೆಪಿ ತಾಲೂಕು ಯುವ ಘಟಕದ ವತಿಯಿಂದ ದೇವನಹಳ್ಳಿ ಪ್ರವಾಸಿಮಂದಿರದಲ್ಲಿ ಅಭಿನಂದಿಸಿದರು.
ಈ ವೇಳೆಯಲ್ಲಿ ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್ ಗೌಡ ಮಾತನಾಡಿ ನನ್ನ ಕರ್ತವ್ಯ ನಿಭಾಯಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮತ್ತು ಮುಖಂಡರೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಾರೆಂಬ ವಿಶ್ವಾಸವಿದೆ. ನಾನು ಪಕ್ಷದಲ್ಲಿ ಅನೇಕ ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ ಪಕ್ಷ ನನ್ನನ್ನು ಗುರುತಿಸಿ ನೀಡಿದ ಜವಬ್ದಾರಿಯನ್ನು ನಿಬಾಯಿಸುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಶ್ವಾಸವಿದೆ. ಯುವ ಘಟಕ ಸದಾ ನಮ್ಮ ಪಕ್ಷದ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ದೇ.ಸು.ನಾಗಾರಾಜ್, ಸುರೇಶಾಚಾರ್, ಸುನೀಲ್, ವಿಜಯ ರಾಘವೇಂದ್ರ,ಯುವ ಘಟಕದ ಪದಾಧಿಕಾರಿಗಳು ಮುಂತಾದವರು ಇದ್ದರು.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…