ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಿ-ರೋಣ್ಣಿರಾಜು

ರೈತರು ಕೇವಲ ಒಂದು ಬೆಳೆಗಳಿಗೆ ಮಾತ್ರ ಸೀಮಿತವಾಗದೆ, ಪಶುಪಾಲನೆಯಂತಹ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಗ್ರ ಕೃಷಿಯನ್ನು ಮಾಡಬೇಕೆಂದರಲ್ಲದೆ, ಕರ್ನಾಟಕವು ಎಲ್ಲ ರೀತಿಯ ಬೆಳೆಗಳನ್ನು ಬೆಳೆಯಲು ಅಗತ್ಯವಿರುವ ಹವಾಮಾನ ಮತ್ತು ವಾಯುಗುಣ ಹೊಂದಿರುವುದರಿಂದ ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಬೇಕೆಂದು ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಪ್ರಬಂಧಕರಾದ ರೋಣ್ಣಿರಾಜು ಅವರು ಹೇಳಿದರು.

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಬಾರ್ಡ್ ಸಂಸ್ಥೆ, ರುಡ್‌ಸೆಟ್ ಸಂಸ್ಥೆ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಇವರ ಸಹಯೋಗದಲ್ಲಿ ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ಆಯೋಜಿಸಲಾಗಿದ್ದ ನಬಾರ್ಡ್ ಸಂಸ್ಥೆಯ ಸಾಧನೆ ಹಾಗೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಬಾರ್ಡ್ ಎಂಬುದು ಕೃಷಿ ಮತ್ತು ಗ್ರಾಮಾಭಿವೃದ್ಧಿಗಾಗಿ ಬ್ಯಾಂಕ್‌ ಹಾಗೂ ಒಕ್ಕೂಟಗಳಿಗೆ ಹಣಕಾಸಿನ ನೆರವು ನೀಡುವ ಸಂಸ್ಥೆಯಾಗಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರಲ್ಲದೆ, ಕುಟುಂಬದ ಸದಸ್ಯರಿಗೆ ಮಾಹಿತಿಯನ್ನು ರವಾನಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳಿಗೆ ತಿಳಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌(ಕೆನರಾ ಬ್ಯಾಂಕ್)ನ ವ್ಯವಸ್ಥಾಪಕರಾದ ಮಧುಕರ್ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಸಾಧಿಸಿರುವ ನಮ್ಮ ದೇಶವು ಸ್ವಾತಂತ್ರ್ಯ ಪಡೆದು 75 ವರ್ಷ ಸಾಧಿಸಿರುವುದು ಅಭಿನಂದನಾರ್ಹ ವಿಷಯವಾಗಿದೆ ಎಂದರು. ಅಲ್ಲದೆ, ಬ್ಯಾಂಕ್‌ ವ್ಯವಹಾರ, ಯೋಜನೆಗಳ ವಿವರ, ಸಾಮಾಜಿಕ ಭದ್ರತಾ ಯೋಜನೆ, ವಿಮೆ ಯೋಜನೆಗಳು, ಡಿಜಿಟಲ್ ಬ್ಯಾಂಕಿಂಗ್, ಶೈಕ್ಷಣಿಕ ಸಾಲ ಸೇರಿದಂತೆ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿ ನೀಡಿದರು.

ಯುವಜನತೆ ಸ್ವ ಉದ್ಯೋಗ ಮಾಡಲು ಮತ್ತು ಕೌಶಲ್ಯಗಳನ್ನು ಹೊಂದಲು ಇರುವ ಅವಕಾಶ ಹಾಗೂ ಸಾಲ ಸೌಲಭ್ಯದ ಕುರಿತು ಅರಿವು ಮೂಡಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಮಂಜುನಾಥ್ ಅವರು ಮಾತನಾಡಿ, ಬೆಳೆ ಸಾಲ ಪಡೆಯಲು ಅರ್ಹತೆ, ಮಾನದಂಡ ಹಾಗೂ ಇನ್ನಿತರ ಮಾಹಿತಿ ನೀಡಿದರಲ್ಲದೆ, ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಹಾಗೂ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಸುರೇಶ್, ಬಿಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕರಾದ ಆನಂದ್, ಆರ್ಥಿಕ ಸಾಕ್ಷರತೆಯ ಸಮಾಲೋಚಕರಾದ ಮಹಂತೇಶಯ್ಯ, ಜ್ಞಾನ ಮಂದಿರ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಕಾಂತ ಸೇರಿದಂತೆ ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಶಿಬಿರಾರ್ಥಿಗಳು ಹಾಗೂ ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago