ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಿ-ರೋಣ್ಣಿರಾಜು

ರೈತರು ಕೇವಲ ಒಂದು ಬೆಳೆಗಳಿಗೆ ಮಾತ್ರ ಸೀಮಿತವಾಗದೆ, ಪಶುಪಾಲನೆಯಂತಹ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಗ್ರ ಕೃಷಿಯನ್ನು ಮಾಡಬೇಕೆಂದರಲ್ಲದೆ, ಕರ್ನಾಟಕವು ಎಲ್ಲ ರೀತಿಯ ಬೆಳೆಗಳನ್ನು ಬೆಳೆಯಲು ಅಗತ್ಯವಿರುವ ಹವಾಮಾನ ಮತ್ತು ವಾಯುಗುಣ ಹೊಂದಿರುವುದರಿಂದ ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಬೇಕೆಂದು ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಪ್ರಬಂಧಕರಾದ ರೋಣ್ಣಿರಾಜು ಅವರು ಹೇಳಿದರು.

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಬಾರ್ಡ್ ಸಂಸ್ಥೆ, ರುಡ್‌ಸೆಟ್ ಸಂಸ್ಥೆ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಇವರ ಸಹಯೋಗದಲ್ಲಿ ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ಆಯೋಜಿಸಲಾಗಿದ್ದ ನಬಾರ್ಡ್ ಸಂಸ್ಥೆಯ ಸಾಧನೆ ಹಾಗೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಬಾರ್ಡ್ ಎಂಬುದು ಕೃಷಿ ಮತ್ತು ಗ್ರಾಮಾಭಿವೃದ್ಧಿಗಾಗಿ ಬ್ಯಾಂಕ್‌ ಹಾಗೂ ಒಕ್ಕೂಟಗಳಿಗೆ ಹಣಕಾಸಿನ ನೆರವು ನೀಡುವ ಸಂಸ್ಥೆಯಾಗಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರಲ್ಲದೆ, ಕುಟುಂಬದ ಸದಸ್ಯರಿಗೆ ಮಾಹಿತಿಯನ್ನು ರವಾನಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳಿಗೆ ತಿಳಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌(ಕೆನರಾ ಬ್ಯಾಂಕ್)ನ ವ್ಯವಸ್ಥಾಪಕರಾದ ಮಧುಕರ್ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಸಾಧಿಸಿರುವ ನಮ್ಮ ದೇಶವು ಸ್ವಾತಂತ್ರ್ಯ ಪಡೆದು 75 ವರ್ಷ ಸಾಧಿಸಿರುವುದು ಅಭಿನಂದನಾರ್ಹ ವಿಷಯವಾಗಿದೆ ಎಂದರು. ಅಲ್ಲದೆ, ಬ್ಯಾಂಕ್‌ ವ್ಯವಹಾರ, ಯೋಜನೆಗಳ ವಿವರ, ಸಾಮಾಜಿಕ ಭದ್ರತಾ ಯೋಜನೆ, ವಿಮೆ ಯೋಜನೆಗಳು, ಡಿಜಿಟಲ್ ಬ್ಯಾಂಕಿಂಗ್, ಶೈಕ್ಷಣಿಕ ಸಾಲ ಸೇರಿದಂತೆ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿ ನೀಡಿದರು.

ಯುವಜನತೆ ಸ್ವ ಉದ್ಯೋಗ ಮಾಡಲು ಮತ್ತು ಕೌಶಲ್ಯಗಳನ್ನು ಹೊಂದಲು ಇರುವ ಅವಕಾಶ ಹಾಗೂ ಸಾಲ ಸೌಲಭ್ಯದ ಕುರಿತು ಅರಿವು ಮೂಡಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಮಂಜುನಾಥ್ ಅವರು ಮಾತನಾಡಿ, ಬೆಳೆ ಸಾಲ ಪಡೆಯಲು ಅರ್ಹತೆ, ಮಾನದಂಡ ಹಾಗೂ ಇನ್ನಿತರ ಮಾಹಿತಿ ನೀಡಿದರಲ್ಲದೆ, ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಹಾಗೂ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಸುರೇಶ್, ಬಿಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕರಾದ ಆನಂದ್, ಆರ್ಥಿಕ ಸಾಕ್ಷರತೆಯ ಸಮಾಲೋಚಕರಾದ ಮಹಂತೇಶಯ್ಯ, ಜ್ಞಾನ ಮಂದಿರ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಕಾಂತ ಸೇರಿದಂತೆ ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಶಿಬಿರಾರ್ಥಿಗಳು ಹಾಗೂ ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago