ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಿ-ರೋಣ್ಣಿರಾಜು

ರೈತರು ಕೇವಲ ಒಂದು ಬೆಳೆಗಳಿಗೆ ಮಾತ್ರ ಸೀಮಿತವಾಗದೆ, ಪಶುಪಾಲನೆಯಂತಹ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಗ್ರ ಕೃಷಿಯನ್ನು ಮಾಡಬೇಕೆಂದರಲ್ಲದೆ, ಕರ್ನಾಟಕವು ಎಲ್ಲ ರೀತಿಯ ಬೆಳೆಗಳನ್ನು ಬೆಳೆಯಲು ಅಗತ್ಯವಿರುವ ಹವಾಮಾನ ಮತ್ತು ವಾಯುಗುಣ ಹೊಂದಿರುವುದರಿಂದ ಯುವ ಜನತೆ ಕೃಷಿಯನ್ನು ಸಮರ್ಥಗೊಳಿಸಲು ಕೈಜೋಡಿಸಬೇಕೆಂದು ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಪ್ರಬಂಧಕರಾದ ರೋಣ್ಣಿರಾಜು ಅವರು ಹೇಳಿದರು.

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಬಾರ್ಡ್ ಸಂಸ್ಥೆ, ರುಡ್‌ಸೆಟ್ ಸಂಸ್ಥೆ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಇವರ ಸಹಯೋಗದಲ್ಲಿ ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿಂದು ಆಯೋಜಿಸಲಾಗಿದ್ದ ನಬಾರ್ಡ್ ಸಂಸ್ಥೆಯ ಸಾಧನೆ ಹಾಗೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಬಾರ್ಡ್ ಎಂಬುದು ಕೃಷಿ ಮತ್ತು ಗ್ರಾಮಾಭಿವೃದ್ಧಿಗಾಗಿ ಬ್ಯಾಂಕ್‌ ಹಾಗೂ ಒಕ್ಕೂಟಗಳಿಗೆ ಹಣಕಾಸಿನ ನೆರವು ನೀಡುವ ಸಂಸ್ಥೆಯಾಗಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರಲ್ಲದೆ, ಕುಟುಂಬದ ಸದಸ್ಯರಿಗೆ ಮಾಹಿತಿಯನ್ನು ರವಾನಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳಿಗೆ ತಿಳಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌(ಕೆನರಾ ಬ್ಯಾಂಕ್)ನ ವ್ಯವಸ್ಥಾಪಕರಾದ ಮಧುಕರ್ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಸಾಧಿಸಿರುವ ನಮ್ಮ ದೇಶವು ಸ್ವಾತಂತ್ರ್ಯ ಪಡೆದು 75 ವರ್ಷ ಸಾಧಿಸಿರುವುದು ಅಭಿನಂದನಾರ್ಹ ವಿಷಯವಾಗಿದೆ ಎಂದರು. ಅಲ್ಲದೆ, ಬ್ಯಾಂಕ್‌ ವ್ಯವಹಾರ, ಯೋಜನೆಗಳ ವಿವರ, ಸಾಮಾಜಿಕ ಭದ್ರತಾ ಯೋಜನೆ, ವಿಮೆ ಯೋಜನೆಗಳು, ಡಿಜಿಟಲ್ ಬ್ಯಾಂಕಿಂಗ್, ಶೈಕ್ಷಣಿಕ ಸಾಲ ಸೇರಿದಂತೆ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿ ನೀಡಿದರು.

ಯುವಜನತೆ ಸ್ವ ಉದ್ಯೋಗ ಮಾಡಲು ಮತ್ತು ಕೌಶಲ್ಯಗಳನ್ನು ಹೊಂದಲು ಇರುವ ಅವಕಾಶ ಹಾಗೂ ಸಾಲ ಸೌಲಭ್ಯದ ಕುರಿತು ಅರಿವು ಮೂಡಿಸಿದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಮಂಜುನಾಥ್ ಅವರು ಮಾತನಾಡಿ, ಬೆಳೆ ಸಾಲ ಪಡೆಯಲು ಅರ್ಹತೆ, ಮಾನದಂಡ ಹಾಗೂ ಇನ್ನಿತರ ಮಾಹಿತಿ ನೀಡಿದರಲ್ಲದೆ, ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಹಾಗೂ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನೆಲಮಂಗಲ ಶಾಖೆಯ ವ್ಯವಸ್ಥಾಪಕರಾದ ಸುರೇಶ್, ಬಿಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕರಾದ ಆನಂದ್, ಆರ್ಥಿಕ ಸಾಕ್ಷರತೆಯ ಸಮಾಲೋಚಕರಾದ ಮಹಂತೇಶಯ್ಯ, ಜ್ಞಾನ ಮಂದಿರ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಕಾಂತ ಸೇರಿದಂತೆ ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಶಿಬಿರಾರ್ಥಿಗಳು ಹಾಗೂ ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 minutes ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

19 minutes ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

1 hour ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

6 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

7 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

20 hours ago