ಮಾದಕ ವಸ್ತುಗಳ ಸೇವನೆಗೊಮ್ಮೆ ದಾಸರಾದರೆ, ಅದರಿಂದ ಹೊರಬರುವುದು ತುಂಬಾ ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದರು.
ಜೂನ್ 26 ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ & ಅಕ್ರಮ ಕಳ್ಳಸಾಗಣೆಕೆ ವಿರೋಧಿ ದಿನದ ಅಂಗವಾಗಿ ಈ ದಿನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರ ನೇತೃತ್ವದಲ್ಲಿ ನಗರದ ಜಾಲಪ್ಪ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಇಂದಿನ ಯುವಜನತೆಯು ಮೋಜು, ಮಸ್ತಿ, ತಡ ರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ. ಇದರಿಂದ ಹದಿಹರೆಯದ ವಯಸ್ಸಿನಲ್ಲಿ ಹಾದಿ ತಪ್ಪುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಯುವಕ- ಯುವತಿಯರಂತೂ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಚಟುವಟಿಕೆಯೆಂದು ತಿಳಿದಿದ್ದರೂ ಇದರಲ್ಲಿ ತೊಡಗಿಸಿಕೊಂಡಿರುವ ಸಂಖ್ಯೆಯು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಮಾದಕ ವ್ಯಸನ ಮತ್ತು ಇದರ ಕಳ್ಳ ಸಾಗಾಣಿಕೆಯಂತಹ ಚಟುವಟಿಕೆಗಳಿಂದ ಜನರನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದರು.
ತಂಬಾಕು, ಡ್ರಗ್ಸ್, ಗಾಂಜ, ಅಫೀಮು ಮತ್ತಿತರವು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ವ್ಯಕ್ತಿ ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಎಲ್ಲರೂ ಇದರಿಂದ ದೂರವಿರಬೇಕು ಎಂದರು.
ಮಾದಕ ವಸ್ತುಗಳ ವ್ಯಸನ ಮಾನಸಿಕ ಕಾಯಿಲೆಯಾಗಿದ್ದು, ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಹೇಳಿದರು.
ಈ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…