ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.
ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಭಾನುವಾರ ಆಯುಷ್ ಟಿವಿ, ಜಾನಪದ ಗಾಯಕ ಗೋ.ನಾ.ಸ್ವಾಮಿ ಮತ್ತು ಸಿಎಂಆರ್ ಶ್ರೀನಾಥ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಗ್ಗಣ್ಣಕ್ಕ ಗಾಯನ ಕಾರ್ಯಕ್ರಮದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಲಾರ ನೆಲದಲ್ಲಿ ನೂರಾರು ಜಾನಪದ ಕಲೆಗಳು ಹಾಗೂ ಲೆಕ್ಕವಿಲ್ಲದಷ್ಟು ಮಂದಿ ಕಲಾವಿದರು ಇದ್ದರು, ಆದರೆ, ಈಗ ಅನೇಕ ಕಲೆಗಳು ನೇಪಥ್ಯಕ್ಕೆ ಸರಿದಿವೆ, ಇಂತ ಕಲೆ ಮತ್ತು ಕಲಾವಿದರ ಬಗ್ಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಜಾನಪದ ಗ್ರಂಥಾಲಯದ ಮೂಲಕ ಯುವ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ಹೇಳಿದರು.
ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಕೋಲಾರ ಜಿಲ್ಲೆಯಿಂದಲೇ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಸ್ಥಳೀಯ ಕಲಾವಿದರು ಸದ್ಬಳಕೆ ಮಾಡಿಕೊಂಡು ಮುಂದುವರೆಸಬೇಕೆಂದು ಸಲಹೆ ನೀಡಿದರು.
ಜಾನಪದ ಗಾಯಕ ಗೋ.ನಾ.ಸ್ವಾಮಿ ಮಾತನಾಡಿ, ಜಾನಪದವೂ ತಮಗೆ ಎಲ್ಲವನ್ನು ಕೊಟ್ಟಿದೆ, ವಿಶ್ವದ 65 ದೇಶಗಳಲ್ಲಿ ಜಾನಪದ ಹಾಡುಗಳನ್ನು ಹಾಡಿದ್ದೇನೆ, ಇದೀಗ ತವರೂರ ಕಲಾವಿದರ ಸೇವೆ ಮಾಡಲು ಬಂದಿದ್ದೇನೆ, ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ, ಆಯ್ಕೆಯಾದ 16 ಮಂದಿಗೆ ಮುಂದಿನ ಭಾನುವಾರ ಭರ್ಜರಿ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಿಸಿದರು.
ಭಾರತಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಾನಪದದಿಂದ ಜಗತ್ತು ಸುತ್ತಬಹುದು ಎಂದು ಗೋ.ನಾ.ಸ್ವಾಮಿ ತೋರಿಸಿಕೊಟ್ಟಿದ್ದಾರೆ, ಕೋಲಾರ ಜಿಲ್ಲೆಯ ಪ್ರತಿ ಮನೆ ಮನದಲ್ಲಿ ಅಡಗಿರುವ ಜಾನಪದ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಿಸಿಕೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರಾಗಿ ಹೊರಹೊಮ್ಮಬೇಕೆಂದರು.
ಇದೇ ಸಂದರ್ಭದಲ್ಲಿ ತಮಟೆ ನಾಗರಾಜ್, ರೋಟರಿ ಸೆಂಟ್ರಲ್ ಕಾರ್ಯದರ್ಶಿ ಎಸ್.ಸುಧಾಕರ್, ಅವಿನಾಶ್ ಬಾಬು, ಬಣಕನಹಳ್ಳಿ ನಟರಾಜ್, ತೀರ್ಪುಗಾರರಾಗಿ ಆಗಮಿಸಿದ್ದ ಶಿವಕುಮಾರ್, ಕುಮಾರ್, ತಬಲ ರಮಣ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…