Categories: ಕೋಲಾರ

ಯುವ ಪೀಳಿಗೆಗೆ ಜಾನಪದವನ್ನ ಪರಿಚಯಿಸಬೇಕು- ಸಿಎಂಆರ್ ಶ್ರೀನಾಥ್

ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.

ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಭಾನುವಾರ ಆಯುಷ್ ಟಿವಿ, ಜಾನಪದ ಗಾಯಕ ಗೋ.ನಾ.ಸ್ವಾಮಿ ಮತ್ತು ಸಿಎಂಆರ್ ಶ್ರೀನಾಥ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಗ್ಗಣ್ಣಕ್ಕ ಗಾಯನ ಕಾರ್ಯಕ್ರಮದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋಲಾರ ನೆಲದಲ್ಲಿ ನೂರಾರು ಜಾನಪದ ಕಲೆಗಳು ಹಾಗೂ ಲೆಕ್ಕವಿಲ್ಲದಷ್ಟು ಮಂದಿ ಕಲಾವಿದರು ಇದ್ದರು, ಆದರೆ, ಈಗ ಅನೇಕ ಕಲೆಗಳು ನೇಪಥ್ಯಕ್ಕೆ ಸರಿದಿವೆ, ಇಂತ ಕಲೆ ಮತ್ತು ಕಲಾವಿದರ ಬಗ್ಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಜಾನಪದ ಗ್ರಂಥಾಲಯದ ಮೂಲಕ ಯುವ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ಹೇಳಿದರು.

ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಕೋಲಾರ ಜಿಲ್ಲೆಯಿಂದಲೇ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಸ್ಥಳೀಯ ಕಲಾವಿದರು ಸದ್ಬಳಕೆ ಮಾಡಿಕೊಂಡು ಮುಂದುವರೆಸಬೇಕೆಂದು ಸಲಹೆ ನೀಡಿದರು.

ಜಾನಪದ ಗಾಯಕ ಗೋ.ನಾ.ಸ್ವಾಮಿ ಮಾತನಾಡಿ, ಜಾನಪದವೂ ತಮಗೆ ಎಲ್ಲವನ್ನು ಕೊಟ್ಟಿದೆ, ವಿಶ್ವದ 65 ದೇಶಗಳಲ್ಲಿ ಜಾನಪದ ಹಾಡುಗಳನ್ನು ಹಾಡಿದ್ದೇನೆ, ಇದೀಗ ತವರೂರ ಕಲಾವಿದರ ಸೇವೆ ಮಾಡಲು ಬಂದಿದ್ದೇನೆ, ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ, ಆಯ್ಕೆಯಾದ 16 ಮಂದಿಗೆ ಮುಂದಿನ ಭಾನುವಾರ ಭರ್ಜರಿ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಿಸಿದರು.

ಭಾರತಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಾನಪದದಿಂದ ಜಗತ್ತು ಸುತ್ತಬಹುದು ಎಂದು ಗೋ.ನಾ.ಸ್ವಾಮಿ ತೋರಿಸಿಕೊಟ್ಟಿದ್ದಾರೆ, ಕೋಲಾರ ಜಿಲ್ಲೆಯ ಪ್ರತಿ ಮನೆ ಮನದಲ್ಲಿ ಅಡಗಿರುವ ಜಾನಪದ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಿಸಿಕೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರಾಗಿ ಹೊರಹೊಮ್ಮಬೇಕೆಂದರು.

ಇದೇ ಸಂದರ್ಭದಲ್ಲಿ ತಮಟೆ ನಾಗರಾಜ್, ರೋಟರಿ ಸೆಂಟ್ರಲ್ ಕಾರ್ಯದರ್ಶಿ ಎಸ್.ಸುಧಾಕರ್, ಅವಿನಾಶ್ ಬಾಬು, ಬಣಕನಹಳ್ಳಿ ನಟರಾಜ್, ತೀರ್ಪುಗಾರರಾಗಿ ಆಗಮಿಸಿದ್ದ ಶಿವಕುಮಾರ್, ಕುಮಾರ್, ತಬಲ ರಮಣ ಮತ್ತಿತರರು ಇದ್ದರು.

 

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago