ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.
ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಭಾನುವಾರ ಆಯುಷ್ ಟಿವಿ, ಜಾನಪದ ಗಾಯಕ ಗೋ.ನಾ.ಸ್ವಾಮಿ ಮತ್ತು ಸಿಎಂಆರ್ ಶ್ರೀನಾಥ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಗ್ಗಣ್ಣಕ್ಕ ಗಾಯನ ಕಾರ್ಯಕ್ರಮದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಲಾರ ನೆಲದಲ್ಲಿ ನೂರಾರು ಜಾನಪದ ಕಲೆಗಳು ಹಾಗೂ ಲೆಕ್ಕವಿಲ್ಲದಷ್ಟು ಮಂದಿ ಕಲಾವಿದರು ಇದ್ದರು, ಆದರೆ, ಈಗ ಅನೇಕ ಕಲೆಗಳು ನೇಪಥ್ಯಕ್ಕೆ ಸರಿದಿವೆ, ಇಂತ ಕಲೆ ಮತ್ತು ಕಲಾವಿದರ ಬಗ್ಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಜಾನಪದ ಗ್ರಂಥಾಲಯದ ಮೂಲಕ ಯುವ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ಹೇಳಿದರು.
ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಕೋಲಾರ ಜಿಲ್ಲೆಯಿಂದಲೇ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಸ್ಥಳೀಯ ಕಲಾವಿದರು ಸದ್ಬಳಕೆ ಮಾಡಿಕೊಂಡು ಮುಂದುವರೆಸಬೇಕೆಂದು ಸಲಹೆ ನೀಡಿದರು.
ಜಾನಪದ ಗಾಯಕ ಗೋ.ನಾ.ಸ್ವಾಮಿ ಮಾತನಾಡಿ, ಜಾನಪದವೂ ತಮಗೆ ಎಲ್ಲವನ್ನು ಕೊಟ್ಟಿದೆ, ವಿಶ್ವದ 65 ದೇಶಗಳಲ್ಲಿ ಜಾನಪದ ಹಾಡುಗಳನ್ನು ಹಾಡಿದ್ದೇನೆ, ಇದೀಗ ತವರೂರ ಕಲಾವಿದರ ಸೇವೆ ಮಾಡಲು ಬಂದಿದ್ದೇನೆ, ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ, ಆಯ್ಕೆಯಾದ 16 ಮಂದಿಗೆ ಮುಂದಿನ ಭಾನುವಾರ ಭರ್ಜರಿ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಿಸಿದರು.
ಭಾರತಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಾನಪದದಿಂದ ಜಗತ್ತು ಸುತ್ತಬಹುದು ಎಂದು ಗೋ.ನಾ.ಸ್ವಾಮಿ ತೋರಿಸಿಕೊಟ್ಟಿದ್ದಾರೆ, ಕೋಲಾರ ಜಿಲ್ಲೆಯ ಪ್ರತಿ ಮನೆ ಮನದಲ್ಲಿ ಅಡಗಿರುವ ಜಾನಪದ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಿಸಿಕೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರಾಗಿ ಹೊರಹೊಮ್ಮಬೇಕೆಂದರು.
ಇದೇ ಸಂದರ್ಭದಲ್ಲಿ ತಮಟೆ ನಾಗರಾಜ್, ರೋಟರಿ ಸೆಂಟ್ರಲ್ ಕಾರ್ಯದರ್ಶಿ ಎಸ್.ಸುಧಾಕರ್, ಅವಿನಾಶ್ ಬಾಬು, ಬಣಕನಹಳ್ಳಿ ನಟರಾಜ್, ತೀರ್ಪುಗಾರರಾಗಿ ಆಗಮಿಸಿದ್ದ ಶಿವಕುಮಾರ್, ಕುಮಾರ್, ತಬಲ ರಮಣ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…