Categories: ಕೋಲಾರ

ಯುವ ಪೀಳಿಗೆಗೆ ಜಾನಪದವನ್ನ ಪರಿಚಯಿಸಬೇಕು- ಸಿಎಂಆರ್ ಶ್ರೀನಾಥ್

ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.

ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಭಾನುವಾರ ಆಯುಷ್ ಟಿವಿ, ಜಾನಪದ ಗಾಯಕ ಗೋ.ನಾ.ಸ್ವಾಮಿ ಮತ್ತು ಸಿಎಂಆರ್ ಶ್ರೀನಾಥ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಗ್ಗಣ್ಣಕ್ಕ ಗಾಯನ ಕಾರ್ಯಕ್ರಮದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋಲಾರ ನೆಲದಲ್ಲಿ ನೂರಾರು ಜಾನಪದ ಕಲೆಗಳು ಹಾಗೂ ಲೆಕ್ಕವಿಲ್ಲದಷ್ಟು ಮಂದಿ ಕಲಾವಿದರು ಇದ್ದರು, ಆದರೆ, ಈಗ ಅನೇಕ ಕಲೆಗಳು ನೇಪಥ್ಯಕ್ಕೆ ಸರಿದಿವೆ, ಇಂತ ಕಲೆ ಮತ್ತು ಕಲಾವಿದರ ಬಗ್ಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಜಾನಪದ ಗ್ರಂಥಾಲಯದ ಮೂಲಕ ಯುವ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ಹೇಳಿದರು.

ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಕೋಲಾರ ಜಿಲ್ಲೆಯಿಂದಲೇ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಸ್ಥಳೀಯ ಕಲಾವಿದರು ಸದ್ಬಳಕೆ ಮಾಡಿಕೊಂಡು ಮುಂದುವರೆಸಬೇಕೆಂದು ಸಲಹೆ ನೀಡಿದರು.

ಜಾನಪದ ಗಾಯಕ ಗೋ.ನಾ.ಸ್ವಾಮಿ ಮಾತನಾಡಿ, ಜಾನಪದವೂ ತಮಗೆ ಎಲ್ಲವನ್ನು ಕೊಟ್ಟಿದೆ, ವಿಶ್ವದ 65 ದೇಶಗಳಲ್ಲಿ ಜಾನಪದ ಹಾಡುಗಳನ್ನು ಹಾಡಿದ್ದೇನೆ, ಇದೀಗ ತವರೂರ ಕಲಾವಿದರ ಸೇವೆ ಮಾಡಲು ಬಂದಿದ್ದೇನೆ, ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ, ಆಯ್ಕೆಯಾದ 16 ಮಂದಿಗೆ ಮುಂದಿನ ಭಾನುವಾರ ಭರ್ಜರಿ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಿಸಿದರು.

ಭಾರತಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಾನಪದದಿಂದ ಜಗತ್ತು ಸುತ್ತಬಹುದು ಎಂದು ಗೋ.ನಾ.ಸ್ವಾಮಿ ತೋರಿಸಿಕೊಟ್ಟಿದ್ದಾರೆ, ಕೋಲಾರ ಜಿಲ್ಲೆಯ ಪ್ರತಿ ಮನೆ ಮನದಲ್ಲಿ ಅಡಗಿರುವ ಜಾನಪದ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಿಸಿಕೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರಾಗಿ ಹೊರಹೊಮ್ಮಬೇಕೆಂದರು.

ಇದೇ ಸಂದರ್ಭದಲ್ಲಿ ತಮಟೆ ನಾಗರಾಜ್, ರೋಟರಿ ಸೆಂಟ್ರಲ್ ಕಾರ್ಯದರ್ಶಿ ಎಸ್.ಸುಧಾಕರ್, ಅವಿನಾಶ್ ಬಾಬು, ಬಣಕನಹಳ್ಳಿ ನಟರಾಜ್, ತೀರ್ಪುಗಾರರಾಗಿ ಆಗಮಿಸಿದ್ದ ಶಿವಕುಮಾರ್, ಕುಮಾರ್, ತಬಲ ರಮಣ ಮತ್ತಿತರರು ಇದ್ದರು.

 

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago