ಯುವ ರಾಜಕಾರಣಿಗಳು ಯಶಸ್ಸು ಗಳಿಸಲು ಜೀವನದಲ್ಲಿ ಸಮಯಪ್ರಜ್ಞೆ ಹಾಗೂ ಶಿಸ್ತು ಇರಬೇಕು- ಸಚಿವ ಕೆ.ಎಚ್.ಮುನಿಯಪ್ಪ ಸಲಹೆ

ಯುವ ರಾಜಕಾರಣಿಗಳು ಯಶಸ್ಸು ಗಳಿಸಲು ಜೀವನದಲ್ಲಿ ಸಮಯಪ್ರಜ್ಞೆ ಹಾಗೂ ಶಿಸ್ತು ಇರಬೇಕು. ನನ್ನಲ್ಲಿನ ಶಿಸ್ತಿನಿಂದ ರಾಜಕೀಯದಲ್ಲಿ 50 ವರ್ಷ ಯಶಸ್ವಿಯಾಗಿ ಉಳಿಯಲು ಸಾಧ್ಯವಾಯಿತು ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ಆಯೋಜಿಸಿದ್ದ ಸ್ಮೃತಿ ಗ್ರಾಮದ ಡಿಮೆನ್ಶಯಾ ಶಂಕು ಸ್ಥಾಪನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮಕ್ಕೆ ತಡವಾಗಿ ಬಂದರು. ಶಾಸಕ ಧೀರಜ್ ಮುನಿರಾಜ್ ಅವರು ತಡವಾಗಿ ಬಂದಿದ್ದರಿಂದ ಸಚಿವ ಕೆ.ಎಚ್.ಮುನಿಯಪ್ಪನವರು ನಗುನಗುತ್ತಾ… ನಯವಾಗಿ ಸಮಯಪ್ರಜ್ಞೆ ಹಾಗೂ ಶಿಸ್ತಿನ ಪಾಠವನ್ನು ಮಾಡಿದರು.

ಗಾಂಧೀಜಿಯ ಪುಸ್ತಕಗಳನ್ನು ಪ್ರತಿಯೊಬ್ಬರು ಓದಬೇಕು. ಅವರ ತತ್ವ ಆದರ್ಶ, ಶಿಸ್ತಿನ ಜೀವನದ ಬಗ್ಗೆ ಕಲಿಯಬೇಕು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳಬೇಕು. ಎಲ್ಲರೂ ಅಭಿವೃದ್ಧಿ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣಬೇಕು. ನಾವು ಪ್ರಮಾಣ ವಚನ ಸ್ವೀಕರಿಸಿದಂತೆ ಯಾವುದೇ ಸ್ವಾರ್ಥಯಿಲ್ಲದೆ ಕೆಲಸ ಮಾಡಬೇಕು. ಸಮಾಜದಲ್ಲಿ ಸಂವಿಧಾನ ಬದ್ದವಾಗಿ ಕೆಲಸ ಮಾಡಬೇಕು ಎಂದು ಯುವ ಶಾಸಕರಿಗೆ ಸಚಿವರು ಸಲಹೆ ನೀಡಿದರು.

ಹಿರಿಯರ ಆರೈಕೆ ಜೀವನದಲ್ಲಿ ಪುಣ್ಯದ ಕೆಲಸ, ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ಧನ್ಯವಾಗಿಸಕೊಳ್ಳಬೇಕು. ಹಿರಿಯರ ಆರೈಕೆಯೂ ನಮ್ಮ ಜೀವದ ಪುಣ್ಯ ಕೆಲಸದಲ್ಲಿ ಒಂದು ಎಂದರು.

ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ತಂದೆ ತಾಯಿಯವರನ್ನು ಕಡೆಗಣಿಸಿ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ. ಈ ಪ್ರವೃತ್ತಿಯನ್ನು ಕಡಿಮೆ ಮಾಡಿಸಬೇಕು. ನಾವು ನಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಜೀವನ ಹಸನಾಗುತ್ತದೆ. ನೈಟಿಂಗೇಲ್ಸ್ ಟ್ರಸ್ಟ್ ವತಿಯಿಂದ ಹಿರಿಯರ ಆರೈಕೆಗಾಗಿ ಹಿರಿಯರ ಮರೆವಿನ ಕಾಯಿಲೆಯನ್ನು ಕಡಿಮೆಗೊಳಿಸುವ ಸಲುವಾಗಿ ಸ್ಮೃತಿ ಗ್ರಾಮವನ್ನು ಆಯೋಜಿಸಿ ಅವರ ಆರೈಕೆ ಮಾಡುವ ಕಾರ್ಯ ಮಾಡಲು ಮುಂದಾಗಿರುವುದು ಸಂತಸದ ವಿಷಯವಾಗಿದೆ ಎಂದರು.

ಹಿರಿಯರ ಆರೈಕೆಯಲ್ಲಿ ನೈಟಿಂಗೇಲ್ಸ್ ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಮ್ಮ ಸರ್ಕಾರದ ವತಿಯಿಂದ ಯಾವುದೇ ರೀತಿಯ ಸಹಕಾರ ಸಹಾಯ ಬೇಕಿದಲ್ಲಿ ಸಹಕರಿಸುತ್ತೇವೆ ಎಂದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಹಿರಿಯರು ವಿವಿಧ ರೀತಿಯ ಕಾಯಿಲೆಯಿಂದ ಬಳಲುತ್ತಿರುತ್ತಾರೆ. 100 ಹಾಸಿಗೆ ಸ್ಮೃತಿ ಗ್ರಾಮವು ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಇದರ ಯಶಸ್ಸಿನಿಂದ ಹೆಚ್ಚಿನ ಜನರಿಗೆ ಸಹಾಯವಾಗಲಿದೆ. ಇದಕ್ಕಾಗಿ ಸ್ಥಳೀಯ ಗ್ರಾಪಂ ಸದಸ್ಯರು, ಅಧ್ಯಕ್ಷರು ನೆರವು ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ರಾಧಾ ಎಸ್.ಮೂರ್ತಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಗಂಗರತ್ನಮ್ಮ ,ಮುಖಂಡರಾದ ರವಿಸಿದ್ದಪ್ಪ, ನಾಗರಾಜು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

7 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

7 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

9 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

9 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

12 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

20 hours ago