ಯುವ ರಾಜಕಾರಣಿಗಳು ಯಶಸ್ಸು ಗಳಿಸಲು ಜೀವನದಲ್ಲಿ ಸಮಯಪ್ರಜ್ಞೆ ಹಾಗೂ ಶಿಸ್ತು ಇರಬೇಕು- ಸಚಿವ ಕೆ.ಎಚ್.ಮುನಿಯಪ್ಪ ಸಲಹೆ

ಯುವ ರಾಜಕಾರಣಿಗಳು ಯಶಸ್ಸು ಗಳಿಸಲು ಜೀವನದಲ್ಲಿ ಸಮಯಪ್ರಜ್ಞೆ ಹಾಗೂ ಶಿಸ್ತು ಇರಬೇಕು. ನನ್ನಲ್ಲಿನ ಶಿಸ್ತಿನಿಂದ ರಾಜಕೀಯದಲ್ಲಿ 50 ವರ್ಷ ಯಶಸ್ವಿಯಾಗಿ ಉಳಿಯಲು ಸಾಧ್ಯವಾಯಿತು ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ಆಯೋಜಿಸಿದ್ದ ಸ್ಮೃತಿ ಗ್ರಾಮದ ಡಿಮೆನ್ಶಯಾ ಶಂಕು ಸ್ಥಾಪನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮಕ್ಕೆ ತಡವಾಗಿ ಬಂದರು. ಶಾಸಕ ಧೀರಜ್ ಮುನಿರಾಜ್ ಅವರು ತಡವಾಗಿ ಬಂದಿದ್ದರಿಂದ ಸಚಿವ ಕೆ.ಎಚ್.ಮುನಿಯಪ್ಪನವರು ನಗುನಗುತ್ತಾ… ನಯವಾಗಿ ಸಮಯಪ್ರಜ್ಞೆ ಹಾಗೂ ಶಿಸ್ತಿನ ಪಾಠವನ್ನು ಮಾಡಿದರು.

ಗಾಂಧೀಜಿಯ ಪುಸ್ತಕಗಳನ್ನು ಪ್ರತಿಯೊಬ್ಬರು ಓದಬೇಕು. ಅವರ ತತ್ವ ಆದರ್ಶ, ಶಿಸ್ತಿನ ಜೀವನದ ಬಗ್ಗೆ ಕಲಿಯಬೇಕು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳಬೇಕು. ಎಲ್ಲರೂ ಅಭಿವೃದ್ಧಿ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣಬೇಕು. ನಾವು ಪ್ರಮಾಣ ವಚನ ಸ್ವೀಕರಿಸಿದಂತೆ ಯಾವುದೇ ಸ್ವಾರ್ಥಯಿಲ್ಲದೆ ಕೆಲಸ ಮಾಡಬೇಕು. ಸಮಾಜದಲ್ಲಿ ಸಂವಿಧಾನ ಬದ್ದವಾಗಿ ಕೆಲಸ ಮಾಡಬೇಕು ಎಂದು ಯುವ ಶಾಸಕರಿಗೆ ಸಚಿವರು ಸಲಹೆ ನೀಡಿದರು.

ಹಿರಿಯರ ಆರೈಕೆ ಜೀವನದಲ್ಲಿ ಪುಣ್ಯದ ಕೆಲಸ, ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ಧನ್ಯವಾಗಿಸಕೊಳ್ಳಬೇಕು. ಹಿರಿಯರ ಆರೈಕೆಯೂ ನಮ್ಮ ಜೀವದ ಪುಣ್ಯ ಕೆಲಸದಲ್ಲಿ ಒಂದು ಎಂದರು.

ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ತಂದೆ ತಾಯಿಯವರನ್ನು ಕಡೆಗಣಿಸಿ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ. ಈ ಪ್ರವೃತ್ತಿಯನ್ನು ಕಡಿಮೆ ಮಾಡಿಸಬೇಕು. ನಾವು ನಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಜೀವನ ಹಸನಾಗುತ್ತದೆ. ನೈಟಿಂಗೇಲ್ಸ್ ಟ್ರಸ್ಟ್ ವತಿಯಿಂದ ಹಿರಿಯರ ಆರೈಕೆಗಾಗಿ ಹಿರಿಯರ ಮರೆವಿನ ಕಾಯಿಲೆಯನ್ನು ಕಡಿಮೆಗೊಳಿಸುವ ಸಲುವಾಗಿ ಸ್ಮೃತಿ ಗ್ರಾಮವನ್ನು ಆಯೋಜಿಸಿ ಅವರ ಆರೈಕೆ ಮಾಡುವ ಕಾರ್ಯ ಮಾಡಲು ಮುಂದಾಗಿರುವುದು ಸಂತಸದ ವಿಷಯವಾಗಿದೆ ಎಂದರು.

ಹಿರಿಯರ ಆರೈಕೆಯಲ್ಲಿ ನೈಟಿಂಗೇಲ್ಸ್ ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಮ್ಮ ಸರ್ಕಾರದ ವತಿಯಿಂದ ಯಾವುದೇ ರೀತಿಯ ಸಹಕಾರ ಸಹಾಯ ಬೇಕಿದಲ್ಲಿ ಸಹಕರಿಸುತ್ತೇವೆ ಎಂದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಹಿರಿಯರು ವಿವಿಧ ರೀತಿಯ ಕಾಯಿಲೆಯಿಂದ ಬಳಲುತ್ತಿರುತ್ತಾರೆ. 100 ಹಾಸಿಗೆ ಸ್ಮೃತಿ ಗ್ರಾಮವು ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಇದರ ಯಶಸ್ಸಿನಿಂದ ಹೆಚ್ಚಿನ ಜನರಿಗೆ ಸಹಾಯವಾಗಲಿದೆ. ಇದಕ್ಕಾಗಿ ಸ್ಥಳೀಯ ಗ್ರಾಪಂ ಸದಸ್ಯರು, ಅಧ್ಯಕ್ಷರು ನೆರವು ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ರಾಧಾ ಎಸ್.ಮೂರ್ತಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಗಂಗರತ್ನಮ್ಮ ,ಮುಖಂಡರಾದ ರವಿಸಿದ್ದಪ್ಪ, ನಾಗರಾಜು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

54 minutes ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago