ಯುವ ಸಬಲೀಕರಣ: ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಕೇಳಚಂದ್ರ ಪ್ರತಿಷ್ಠಾನವು ಸರ್ವಜ್ಞನಗರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಬಲದೊಂದಿಗೆ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ 15 ನೇ ಬ್ಯಾಚ್‌ಗೆ ಅರ್ಜಿ ಆಹ್ವಾನಿಸಿದೆ.

ಸರ್ವಜ್ಞನಗರ ಕ್ಷೇತ್ರದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಸ್ವಾವಲಂಬನೆಯ ಜೀವನ ಕಟ್ಟಿಕೊಡುವ ಗುರಿಯೊಂದಿಗೆ 2026ರ ಜನವರಿ 6 ರಂದು ಜೀವನಹಳ್ಳಿ ಕೇಂದ್ರ ಶಾಖೆಯಲ್ಲಿ ಹೊಸ ಬ್ಯಾಚ್ ಪ್ರಾರಂಭವಾಗಲಿದೆ.

ಈ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕಲ್ ಮತ್ತು ಮೊಬೈಲ್ ರಿಪೇರಿ, ಸರ್ವೀಸಿಂಗ್ ಮತ್ತು ಡೇಟಾ ಎಂಟ್ರಿ ಆಪರೇಟಿಂಗ್ – ಈ 3 ಕ್ಷೇತ್ರಗಳಲ್ಲಿ ಔದ್ಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಈಗಿನ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸಲು ಈ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಲಾಗಿದೆ.

*ಅರ್ಹತಾ ಮಾನದಂಡ*:
ಕನಿಷ್ಠ 9 ನೇ ತರಗತಿಯ ಅರ್ಹತೆ, ಅರ್ಜಿದಾರರು 17 ರಿಂದ 32 ವರ್ಷ ವಯಸ್ಸಿನೊಳಗಿರಬೇಕು.

*ಸ್ಥಳ*: ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ತರಬೇತಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಪಡೆಯಲು ಮತ್ತು ಲತಾ ಗಣೇಶ್ (98451 48710) ಅವರನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.

ಕೇಳಚಂದ್ರ ಪ್ರತಿಷ್ಠಾನದಡಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಅಲ್ಲದೇ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಮೂಲಸೌಕರ್ಯ ಸೇರಿದಂತೆ ಸುಮಾರು ಒಂದು ದಶಕದಿಂದ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕೇಳಚಂದ್ರ ಫೌಂಡೇಶನ್ ಮೂಲಕ ಕೆ.ಜೆ. ಜಾರ್ಜ್ ಅವರು ಸರ್ವಜ್ಞನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸುತ್ತಿದ್ದಾರೆ.

2014 ರಲ್ಲಿ ಸ್ಥಾಪನೆಯಾದ ಸರ್ವಜ್ಞ ಆರೋಗ್ಯ ರಕ್ಷಣಾ ಸಂಸ್ಥೆ (SHCI) ಪ್ರತಿಷ್ಠಾನದ ಪ್ರಮುಖ ಸಂಸ್ಥೆಯಾಗಿದೆ. 2014ರ ಏಪ್ರಿಲ್ ಮತ್ತು 2025 ರ ಮಾರ್ಚ್ ಅವಧಿಯಲ್ಲಿ SHCI 34,367 ಉಚಿತ ಡಯಾಲಿಸಿಸ್ ಗೆ ನೆರವಾಗಿದೆ.

ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವು 1.07 ಲಕ್ಷಕ್ಕೂ ಹೆಚ್ಚು ಸಮಾಲೋಚನೆಗಳನ್ನು ನಡೆಸಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ರಕ್ಷಣೆಯ ಹೊರತಾಗಿ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿ, ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮೂಲಸೌಕರ್ಯ ಸುಧಾರಣೆ ಮತ್ತು ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ಸೌಲಭ್ಯಗಳು, ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆಗಳು ಸೇರಿದಂತೆ ನಾಗರಿಕ ಮೂಲಸೌಕರ್ಯ ಕಲ್ಪಿಸುವಲ್ಲಿ ಪ್ರತಿಷ್ಠಾನದ ಪಾತ್ರ ಮಹತ್ವದ್ದು.

“ಕೌಶಲ್ಯ ಅಭಿವೃದ್ಧಿಯು ಸುಸ್ಥಿರ ಜೀವನೋಪಾಯಕ್ಕೆ ದಾರಿಯಾಗಿದೆ. ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ, ಸರ್ವಜ್ಞನಗರದ ಯುವಜನರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೆರವು ಒದಗಿಸಲಾಗುವುದು. ಉದ್ಯೋಗಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರು ಕೇವಲ ಒಂದು ಕುಟುಂಬ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಬಲ ತುಂಬುತ್ತಾರೆ. ಕೇಳಚಂದ್ರ ಫೌಂಡೇಶನ್ ತಳಮಟ್ಟದಿಂದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಜನರ ಆರೋಗ್ಯ ರಕ್ಷಣೆ, ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಲು ಬದ್ಧ” ಎಂದು ಇಂಧನ ಸಚಿವರ ಕೆ.ಜೆ. ಜಾರ್ಜ್ ಹೇಳಿದರು.

Ramesh Babu

Journalist

Recent Posts

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

9 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

9 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

10 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

10 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

17 hours ago

ಅನ್ನದಾತ ಅನಾಥನಾಗುವ ಮುನ್ನ……. ಅನ್ನಕ್ಕಾಗಿ ನಾವು ಪರದಾಡುವ ಮುನ್ನ……

ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…

21 hours ago