ಯುವ ಸಬಲೀಕರಣ: ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಕೇಳಚಂದ್ರ ಪ್ರತಿಷ್ಠಾನವು ಸರ್ವಜ್ಞನಗರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಬಲದೊಂದಿಗೆ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ 15 ನೇ ಬ್ಯಾಚ್‌ಗೆ ಅರ್ಜಿ ಆಹ್ವಾನಿಸಿದೆ.

ಸರ್ವಜ್ಞನಗರ ಕ್ಷೇತ್ರದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಸ್ವಾವಲಂಬನೆಯ ಜೀವನ ಕಟ್ಟಿಕೊಡುವ ಗುರಿಯೊಂದಿಗೆ 2026ರ ಜನವರಿ 6 ರಂದು ಜೀವನಹಳ್ಳಿ ಕೇಂದ್ರ ಶಾಖೆಯಲ್ಲಿ ಹೊಸ ಬ್ಯಾಚ್ ಪ್ರಾರಂಭವಾಗಲಿದೆ.

ಈ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕಲ್ ಮತ್ತು ಮೊಬೈಲ್ ರಿಪೇರಿ, ಸರ್ವೀಸಿಂಗ್ ಮತ್ತು ಡೇಟಾ ಎಂಟ್ರಿ ಆಪರೇಟಿಂಗ್ – ಈ 3 ಕ್ಷೇತ್ರಗಳಲ್ಲಿ ಔದ್ಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಈಗಿನ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸಲು ಈ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಲಾಗಿದೆ.

*ಅರ್ಹತಾ ಮಾನದಂಡ*:
ಕನಿಷ್ಠ 9 ನೇ ತರಗತಿಯ ಅರ್ಹತೆ, ಅರ್ಜಿದಾರರು 17 ರಿಂದ 32 ವರ್ಷ ವಯಸ್ಸಿನೊಳಗಿರಬೇಕು.

*ಸ್ಥಳ*: ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ತರಬೇತಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಪಡೆಯಲು ಮತ್ತು ಲತಾ ಗಣೇಶ್ (98451 48710) ಅವರನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.

ಕೇಳಚಂದ್ರ ಪ್ರತಿಷ್ಠಾನದಡಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಅಲ್ಲದೇ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಮೂಲಸೌಕರ್ಯ ಸೇರಿದಂತೆ ಸುಮಾರು ಒಂದು ದಶಕದಿಂದ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕೇಳಚಂದ್ರ ಫೌಂಡೇಶನ್ ಮೂಲಕ ಕೆ.ಜೆ. ಜಾರ್ಜ್ ಅವರು ಸರ್ವಜ್ಞನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸುತ್ತಿದ್ದಾರೆ.

2014 ರಲ್ಲಿ ಸ್ಥಾಪನೆಯಾದ ಸರ್ವಜ್ಞ ಆರೋಗ್ಯ ರಕ್ಷಣಾ ಸಂಸ್ಥೆ (SHCI) ಪ್ರತಿಷ್ಠಾನದ ಪ್ರಮುಖ ಸಂಸ್ಥೆಯಾಗಿದೆ. 2014ರ ಏಪ್ರಿಲ್ ಮತ್ತು 2025 ರ ಮಾರ್ಚ್ ಅವಧಿಯಲ್ಲಿ SHCI 34,367 ಉಚಿತ ಡಯಾಲಿಸಿಸ್ ಗೆ ನೆರವಾಗಿದೆ.

ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವು 1.07 ಲಕ್ಷಕ್ಕೂ ಹೆಚ್ಚು ಸಮಾಲೋಚನೆಗಳನ್ನು ನಡೆಸಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ರಕ್ಷಣೆಯ ಹೊರತಾಗಿ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿ, ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮೂಲಸೌಕರ್ಯ ಸುಧಾರಣೆ ಮತ್ತು ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ಸೌಲಭ್ಯಗಳು, ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆಗಳು ಸೇರಿದಂತೆ ನಾಗರಿಕ ಮೂಲಸೌಕರ್ಯ ಕಲ್ಪಿಸುವಲ್ಲಿ ಪ್ರತಿಷ್ಠಾನದ ಪಾತ್ರ ಮಹತ್ವದ್ದು.

“ಕೌಶಲ್ಯ ಅಭಿವೃದ್ಧಿಯು ಸುಸ್ಥಿರ ಜೀವನೋಪಾಯಕ್ಕೆ ದಾರಿಯಾಗಿದೆ. ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ, ಸರ್ವಜ್ಞನಗರದ ಯುವಜನರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೆರವು ಒದಗಿಸಲಾಗುವುದು. ಉದ್ಯೋಗಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರು ಕೇವಲ ಒಂದು ಕುಟುಂಬ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಬಲ ತುಂಬುತ್ತಾರೆ. ಕೇಳಚಂದ್ರ ಫೌಂಡೇಶನ್ ತಳಮಟ್ಟದಿಂದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಜನರ ಆರೋಗ್ಯ ರಕ್ಷಣೆ, ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಲು ಬದ್ಧ” ಎಂದು ಇಂಧನ ಸಚಿವರ ಕೆ.ಜೆ. ಜಾರ್ಜ್ ಹೇಳಿದರು.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

17 minutes ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

12 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

13 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

16 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

18 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

20 hours ago