ಯುವ ಸಬಲೀಕರಣ: ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಕೇಳಚಂದ್ರ ಪ್ರತಿಷ್ಠಾನವು ಸರ್ವಜ್ಞನಗರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಬಲದೊಂದಿಗೆ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ 15 ನೇ ಬ್ಯಾಚ್‌ಗೆ ಅರ್ಜಿ ಆಹ್ವಾನಿಸಿದೆ.

ಸರ್ವಜ್ಞನಗರ ಕ್ಷೇತ್ರದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಸ್ವಾವಲಂಬನೆಯ ಜೀವನ ಕಟ್ಟಿಕೊಡುವ ಗುರಿಯೊಂದಿಗೆ 2026ರ ಜನವರಿ 6 ರಂದು ಜೀವನಹಳ್ಳಿ ಕೇಂದ್ರ ಶಾಖೆಯಲ್ಲಿ ಹೊಸ ಬ್ಯಾಚ್ ಪ್ರಾರಂಭವಾಗಲಿದೆ.

ಈ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕಲ್ ಮತ್ತು ಮೊಬೈಲ್ ರಿಪೇರಿ, ಸರ್ವೀಸಿಂಗ್ ಮತ್ತು ಡೇಟಾ ಎಂಟ್ರಿ ಆಪರೇಟಿಂಗ್ – ಈ 3 ಕ್ಷೇತ್ರಗಳಲ್ಲಿ ಔದ್ಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಈಗಿನ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸಲು ಈ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಲಾಗಿದೆ.

*ಅರ್ಹತಾ ಮಾನದಂಡ*:
ಕನಿಷ್ಠ 9 ನೇ ತರಗತಿಯ ಅರ್ಹತೆ, ಅರ್ಜಿದಾರರು 17 ರಿಂದ 32 ವರ್ಷ ವಯಸ್ಸಿನೊಳಗಿರಬೇಕು.

*ಸ್ಥಳ*: ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ತರಬೇತಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಪಡೆಯಲು ಮತ್ತು ಲತಾ ಗಣೇಶ್ (98451 48710) ಅವರನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.

ಕೇಳಚಂದ್ರ ಪ್ರತಿಷ್ಠಾನದಡಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಅಲ್ಲದೇ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಮೂಲಸೌಕರ್ಯ ಸೇರಿದಂತೆ ಸುಮಾರು ಒಂದು ದಶಕದಿಂದ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕೇಳಚಂದ್ರ ಫೌಂಡೇಶನ್ ಮೂಲಕ ಕೆ.ಜೆ. ಜಾರ್ಜ್ ಅವರು ಸರ್ವಜ್ಞನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸುತ್ತಿದ್ದಾರೆ.

2014 ರಲ್ಲಿ ಸ್ಥಾಪನೆಯಾದ ಸರ್ವಜ್ಞ ಆರೋಗ್ಯ ರಕ್ಷಣಾ ಸಂಸ್ಥೆ (SHCI) ಪ್ರತಿಷ್ಠಾನದ ಪ್ರಮುಖ ಸಂಸ್ಥೆಯಾಗಿದೆ. 2014ರ ಏಪ್ರಿಲ್ ಮತ್ತು 2025 ರ ಮಾರ್ಚ್ ಅವಧಿಯಲ್ಲಿ SHCI 34,367 ಉಚಿತ ಡಯಾಲಿಸಿಸ್ ಗೆ ನೆರವಾಗಿದೆ.

ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವು 1.07 ಲಕ್ಷಕ್ಕೂ ಹೆಚ್ಚು ಸಮಾಲೋಚನೆಗಳನ್ನು ನಡೆಸಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ರಕ್ಷಣೆಯ ಹೊರತಾಗಿ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿ, ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮೂಲಸೌಕರ್ಯ ಸುಧಾರಣೆ ಮತ್ತು ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ಸೌಲಭ್ಯಗಳು, ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆಗಳು ಸೇರಿದಂತೆ ನಾಗರಿಕ ಮೂಲಸೌಕರ್ಯ ಕಲ್ಪಿಸುವಲ್ಲಿ ಪ್ರತಿಷ್ಠಾನದ ಪಾತ್ರ ಮಹತ್ವದ್ದು.

“ಕೌಶಲ್ಯ ಅಭಿವೃದ್ಧಿಯು ಸುಸ್ಥಿರ ಜೀವನೋಪಾಯಕ್ಕೆ ದಾರಿಯಾಗಿದೆ. ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ, ಸರ್ವಜ್ಞನಗರದ ಯುವಜನರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೆರವು ಒದಗಿಸಲಾಗುವುದು. ಉದ್ಯೋಗಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರು ಕೇವಲ ಒಂದು ಕುಟುಂಬ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಬಲ ತುಂಬುತ್ತಾರೆ. ಕೇಳಚಂದ್ರ ಫೌಂಡೇಶನ್ ತಳಮಟ್ಟದಿಂದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಜನರ ಆರೋಗ್ಯ ರಕ್ಷಣೆ, ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಲು ಬದ್ಧ” ಎಂದು ಇಂಧನ ಸಚಿವರ ಕೆ.ಜೆ. ಜಾರ್ಜ್ ಹೇಳಿದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago