ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಮ್/ ಫಿಟ್ನೆಸ್  ತರಬೇತಿ ಶಿಬಿರವು ಜನವರಿ 24 ರಿಂದ  ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು,  ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.

ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.

ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ  ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ  ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.

ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.

ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.

ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.

ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago