ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಮ್/ ಫಿಟ್ನೆಸ್  ತರಬೇತಿ ಶಿಬಿರವು ಜನವರಿ 24 ರಿಂದ  ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು,  ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.

ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.

ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ  ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ  ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.

ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.

ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.

ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.

ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

1 hour ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

2 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

3 hours ago

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

4 hours ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

6 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

14 hours ago