ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಮ್/ ಫಿಟ್ನೆಸ್ ತರಬೇತಿ ಶಿಬಿರವು ಜನವರಿ 24 ರಿಂದ ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.
ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.
ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.
ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.
ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.
ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.
ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.
ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…