ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಮ್/ ಫಿಟ್ನೆಸ್ ತರಬೇತಿ ಶಿಬಿರವು ಜನವರಿ 24 ರಿಂದ ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.
ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.
ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.
ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.
ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.
ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.
ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.
ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…