ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಮ್/ ಫಿಟ್ನೆಸ್  ತರಬೇತಿ ಶಿಬಿರವು ಜನವರಿ 24 ರಿಂದ  ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು,  ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.

ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.

ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ  ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ  ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.

ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.

ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.

ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.

ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago