ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ 2023 ರ ನವೆಂಬರ್ 28ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಅರ್ಹ ಕ್ರೀಡಾ ಪೋಷಕರಿಂದ / ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು  ಅರ್ಜಿಗಳನ್ನು 2023 ನವೆಂಬರ್ 28 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.

ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ  ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

2022ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್‌ಲೈನ್ (ವೆಬ್‌ಸೈಟ್: https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಗಳನ್ನು 2023 ರ ನವೆಂಬರ್ 28 ರೊಳಗೆ ಸಲ್ಲಿಸಬೇಕು.

ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಜಿಲ್ಲಾ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ಅರ್ಜಿ ಆಹ್ವಾನ

2021 ಮತ್ತು 2022 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪುತಿನಿಧಿಸಿ ಭಾಗವಹಿಸಿದಲ್ಲಿ/ಪದಕ ವಿಜೇತರಾದಲ್ಲಿ ರೂ.50,000/- ಗಳ ನಗದು ಪುರಸ್ಕಾರ ನೀಡುವುದು, ಒಲಂಪಿಕ್ಸ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಕ್ರೀಡಾಕೂಟಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಕ್ರೀಡಾಕೂಟಗಳಲ್ಲಿ ಪದಕ ಪಡೆಯುವ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ಅಥವಾ ವಾರ್ಷಿಕ ಅತ್ಯುತ್ತಮ ಎರಡು ಸಾಧನೆಗಳನ್ನು ಪರಿಗಣಿಸಿ ಯಾವುದು ಕಡಿಮೆಯೊ ಆ ಮೊತ್ತಕ್ಕೆ ನಗದು ಬಹುಮಾನವನ್ನು ನೀಡಲಾಗುವುದು.

ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ಹಾಗೂ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು 2023 ರ ನವೆಂಬರ್ 28 ರ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.ಅಂತಿಮ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-29787442, ಮೊಬೈಲ್ ಸಂಖ್ಯೆ 9632778567 ಮೂಲಕ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago