ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ    ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ  ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು  ಜ್ಞಾನದ ಅರಿವನ್ನು ವಿಸ್ತರಿಸುತ್ತವೆ.  ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.

ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು  ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ  ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು  ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ.  ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ  ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ,   ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

11 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago