ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ    ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ  ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು  ಜ್ಞಾನದ ಅರಿವನ್ನು ವಿಸ್ತರಿಸುತ್ತವೆ.  ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.

ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು  ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ  ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು  ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ.  ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ  ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ,   ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago