ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ    ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ  ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು  ಜ್ಞಾನದ ಅರಿವನ್ನು ವಿಸ್ತರಿಸುತ್ತವೆ.  ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.

ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು  ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ  ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು  ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ.  ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ  ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ,   ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

31 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago