ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ    ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ  ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು  ಜ್ಞಾನದ ಅರಿವನ್ನು ವಿಸ್ತರಿಸುತ್ತವೆ.  ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.

ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು  ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ  ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು  ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ.  ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ  ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ,   ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago