ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ    ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ  ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು  ಜ್ಞಾನದ ಅರಿವನ್ನು ವಿಸ್ತರಿಸುತ್ತವೆ.  ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.

ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು  ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ  ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು  ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ.  ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ  ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ,   ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

10 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

13 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

17 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago