ಭಾರತವು ಯುವ ಸಮುದಾಯದಿಂದ ಕೂಡಿದ್ದು, ದೇಶವು ಆರ್ಥಿಕವಾಗಿ, ಸಮಾಜಿಕವಾಗಿ ಸೇರಿದಂತೆ ಎಲ್ಲಾ ರಂಗದಲ್ಲೂ ಸದೃಢವಾಗಬೇಕಾದರೆ ಯುವ ಸಮುದಾಯದ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ತಾಲೂಕಿನ ರಘುನಾಥಪುರ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ಅಂಜನಾದ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿಇಟಿಯಲ್ಲಿ ಸರಕಾರಿ ಸೀಟುಗಳಿಸಿದ ಹತ್ತು ವಿದ್ಯಾರ್ಥಿಳಿಗೆ ವಾರ್ಷಿಕ ಶುಲ್ಕವನ್ನು ಕಟ್ಟಲಾಗುವುದು ಎಂದು ವಿದ್ಯಾರ್ಥಿಗಳಿ ಭರವಸೆ ನೀಡಿದರು.
ತಾಲೂಕಿಗೆ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ. ಇದನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕ್ರೇಡಿಟ್ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ದೊಡ್ಡಬಳ್ಳಾಪುರದ ಶಾಸಕನಾಗಿ ಆರೋಗ್ಯ ಸಚಿವರಿಗೆ ಪತ್ರ ಮುಖೇನ ಮನವಿಯನ್ನು ಸಲ್ಲಿಸಿದ್ದು, ಸದನದಲ್ಲಿ ಈ ಬಗ್ಗೆ ಗಮನ ಸೆಳೆದಿದ್ದೇನೆ. ಇಲ್ಲಿ ನಾನು ಎಂಬ ಕ್ರೆಡಿಟ್ ತೆಗೆದುಕೊಳ್ಳುತ್ತಿಲ್ಲ ಕ್ಷೇತ್ರದ ಜನತೆಗೆ ಶಾಸಕನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಸೇರಿದಂತೆ ನಗರ ಸಭಾ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…