ಭಾರತವು ಯುವ ಸಮುದಾಯದಿಂದ ಕೂಡಿದ್ದು, ದೇಶವು ಆರ್ಥಿಕವಾಗಿ, ಸಮಾಜಿಕವಾಗಿ ಸೇರಿದಂತೆ ಎಲ್ಲಾ ರಂಗದಲ್ಲೂ ಸದೃಢವಾಗಬೇಕಾದರೆ ಯುವ ಸಮುದಾಯದ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ತಾಲೂಕಿನ ರಘುನಾಥಪುರ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ಅಂಜನಾದ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿಇಟಿಯಲ್ಲಿ ಸರಕಾರಿ ಸೀಟುಗಳಿಸಿದ ಹತ್ತು ವಿದ್ಯಾರ್ಥಿಳಿಗೆ ವಾರ್ಷಿಕ ಶುಲ್ಕವನ್ನು ಕಟ್ಟಲಾಗುವುದು ಎಂದು ವಿದ್ಯಾರ್ಥಿಗಳಿ ಭರವಸೆ ನೀಡಿದರು.
ತಾಲೂಕಿಗೆ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ. ಇದನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕ್ರೇಡಿಟ್ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ದೊಡ್ಡಬಳ್ಳಾಪುರದ ಶಾಸಕನಾಗಿ ಆರೋಗ್ಯ ಸಚಿವರಿಗೆ ಪತ್ರ ಮುಖೇನ ಮನವಿಯನ್ನು ಸಲ್ಲಿಸಿದ್ದು, ಸದನದಲ್ಲಿ ಈ ಬಗ್ಗೆ ಗಮನ ಸೆಳೆದಿದ್ದೇನೆ. ಇಲ್ಲಿ ನಾನು ಎಂಬ ಕ್ರೆಡಿಟ್ ತೆಗೆದುಕೊಳ್ಳುತ್ತಿಲ್ಲ ಕ್ಷೇತ್ರದ ಜನತೆಗೆ ಶಾಸಕನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಸೇರಿದಂತೆ ನಗರ ಸಭಾ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…