ಭಾರತವು ಯುವ ಸಮುದಾಯದಿಂದ ಕೂಡಿದ್ದು, ದೇಶವು ಆರ್ಥಿಕವಾಗಿ, ಸಮಾಜಿಕವಾಗಿ ಸೇರಿದಂತೆ ಎಲ್ಲಾ ರಂಗದಲ್ಲೂ ಸದೃಢವಾಗಬೇಕಾದರೆ ಯುವ ಸಮುದಾಯದ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ತಾಲೂಕಿನ ರಘುನಾಥಪುರ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ಅಂಜನಾದ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿಇಟಿಯಲ್ಲಿ ಸರಕಾರಿ ಸೀಟುಗಳಿಸಿದ ಹತ್ತು ವಿದ್ಯಾರ್ಥಿಳಿಗೆ ವಾರ್ಷಿಕ ಶುಲ್ಕವನ್ನು ಕಟ್ಟಲಾಗುವುದು ಎಂದು ವಿದ್ಯಾರ್ಥಿಗಳಿ ಭರವಸೆ ನೀಡಿದರು.
ತಾಲೂಕಿಗೆ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ. ಇದನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕ್ರೇಡಿಟ್ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ದೊಡ್ಡಬಳ್ಳಾಪುರದ ಶಾಸಕನಾಗಿ ಆರೋಗ್ಯ ಸಚಿವರಿಗೆ ಪತ್ರ ಮುಖೇನ ಮನವಿಯನ್ನು ಸಲ್ಲಿಸಿದ್ದು, ಸದನದಲ್ಲಿ ಈ ಬಗ್ಗೆ ಗಮನ ಸೆಳೆದಿದ್ದೇನೆ. ಇಲ್ಲಿ ನಾನು ಎಂಬ ಕ್ರೆಡಿಟ್ ತೆಗೆದುಕೊಳ್ಳುತ್ತಿಲ್ಲ ಕ್ಷೇತ್ರದ ಜನತೆಗೆ ಶಾಸಕನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಸೇರಿದಂತೆ ನಗರ ಸಭಾ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…