ಯುವ ಸಮುದಾಯ ವ್ಯವಸ್ಥೆಯನ್ನ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜು

ಭಾರತವು ಯುವ ಸಮುದಾಯದಿಂದ ಕೂಡಿದ್ದು, ದೇಶವು ಆರ್ಥಿಕವಾಗಿ, ಸಮಾಜಿಕವಾಗಿ ಸೇರಿದಂತೆ ಎಲ್ಲಾ ರಂಗದಲ್ಲೂ ಸದೃಢವಾಗಬೇಕಾದರೆ ಯುವ ಸಮುದಾಯದ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ತಾಲೂಕಿನ ರಘುನಾಥಪುರ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ಅಂಜನಾದ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಸಮುದಾಯವು ಸರ್ಕಾರ ಹಾಗೂ ಸಮಾಜದ ವ್ಯವಸ್ಥೆಯನ್ನು ಪ್ರಶ್ನಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಭ್ರಷ್ಟಾಚಾರದಂತಹ ಪಿಡುಗುಗಳನ್ನು ಮಟ್ಟ ಹಾಕಲು ಯುವ ಕ್ರಾಂತಿಯಿಂದ ಸಾಧ್ಯ. ಯುವಕರು ಕೇವಲ ಪದವಿ ಪಡೆಯುವ ನಿಟ್ಟಿನಲ್ಲಿ ತಮ್ಮ ಗುರಿಯನ್ನು ಹೊಂದಬಾರದು. ಬದಲಿಗೆ ಜ್ಞಾನದ ಜೊತೆಗೆ ಸೃಜನಶೀಲ ಕೌಶಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ದೇಶಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಬೇಕು ಎಂದರು.

ಸಿಇಟಿಯಲ್ಲಿ ಸರಕಾರಿ ಸೀಟುಗಳಿಸಿದ ಹತ್ತು ವಿದ್ಯಾರ್ಥಿಳಿಗೆ ವಾರ್ಷಿಕ ಶುಲ್ಕವನ್ನು ಕಟ್ಟಲಾಗುವುದು ಎಂದು ವಿದ್ಯಾರ್ಥಿಗಳಿ ಭರವಸೆ ನೀಡಿದರು.

ಮುಂಬರುವ ದಿನಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್‌ಗಳ ಮೂಲಕ ಸರಕಾರದ 28 ಇಲಾಖೆಯ ಅಧಿಕಾರಿಗಳ ದೂರವಾಣಿ ಸಂಖ್ಯೆ ಸೇರಿದಂತೆ ನಿಮ್ಮ ಅಗತ್ಯ ಸರಕಾರಿ ಕೆಲಸಗಳಿಗೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತೇನೆ. ಮೇ 13ಕ್ಕೆ ನಾನು ಶಾಸಕನಾಗಿ ಒಂದು ವರ್ಷಪೂರ್ಣಗೊಳ್ಳಲಿದ್ದು, ಆ ದಿನ ಪತ್ರಿಕಾಗೋಷ್ಠಿ ನಡೆಸಿ ನನ್ನ ಒಂದು ವರ್ಷದ ಸಾಧನೆಯನ್ನು ದಾಖಲೆ ಸಮೇತ ಜನರ ಮುಂದೆ ಇಡುತ್ತೇನೆ ಎಂದು ಹೇಳಿದರು.

ತಾಲೂಕಿಗೆ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ. ಇದನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕ್ರೇಡಿಟ್ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ದೊಡ್ಡಬಳ್ಳಾಪುರದ ಶಾಸಕನಾಗಿ ಆರೋಗ್ಯ ಸಚಿವರಿಗೆ ಪತ್ರ ಮುಖೇನ ಮನವಿಯನ್ನು ಸಲ್ಲಿಸಿದ್ದು, ಸದನದಲ್ಲಿ ಈ ಬಗ್ಗೆ ಗಮನ ಸೆಳೆದಿದ್ದೇನೆ. ಇಲ್ಲಿ ನಾನು ಎಂಬ ಕ್ರೆಡಿಟ್ ತೆಗೆದುಕೊಳ್ಳುತ್ತಿಲ್ಲ ಕ್ಷೇತ್ರದ ಜನತೆಗೆ ಶಾಸಕನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದರು.

ಈ ವೇಳೆ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಸೇರಿದಂತೆ ನಗರ ಸಭಾ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

22 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago