ಮಳೆ ಬಂದಾಗ ಮಳೆ ನೀರಿನ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.
ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು, ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…