ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

5 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

6 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

7 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

12 hours ago