ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

3 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

19 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

20 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago