ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago