ಮಳೆ ಬಂದಾಗ ಮಳೆ ನೀರಿನ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.
ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು, ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…