ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

15 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

19 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

20 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago